ಬಿಬಿಎಂಪಿ ವ್ಯಾಪ್ತಿಗೆ ಗ್ರಂಥಾಲಯಗಳು ಬೇಡ: ಬರಗೂರು ರಾಮಚಂದ್ರಪ್ಪ

Update: 2019-07-05 18:23 GMT

ಬೆಂಗಳೂರು, ಜು.5: ನಗರದಲ್ಲಿರುವ ಗ್ರಂಥಾಲಯಗಳನ್ನು ಬಿಬಿಎಂಪಿ ವಶಕ್ಕೆ ಪಡೆಯುವ ಪ್ರಸ್ತಾವನೆಯನ್ನು ಕೈಬಿಡಬೇಕೆಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಒತ್ತಾಯ ಮಾಡಿದ್ದಾರೆ.

ಈ ಕುರಿತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ಗೆ ಪತ್ರ ಬರೆದಿರುವ ಅವರು, ಗ್ರಂಥಾಲಯಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತರುವ ಪ್ರಸ್ತಾವನೆಯನ್ನು ರಾಜ್ಯದ ಎಲ್ಲ ಸಾಹಿತಿಗಳು, ಪ್ರಕಾಶಕರು ಹಾಗೂ ಕರ್ನಾಟಕ ಪುಸ್ತಕ ಪ್ರಾಧಿಕಾರ ಖಂಡಿಸಿದ್ದಾರೆ. ಹಾಗೂ ಸರಕಾರದ್ದೆ ಇನ್ನೊಂದು ಇಲಾಖೆಯ ವ್ಯಾಪ್ತಿಯನ್ನು ಕುಗ್ಗಿಸುವ ಈ ಪ್ರಸ್ತಾವನೆಯನ್ನು ಹಿಂಪಡೆಯಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News