ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಇಲ್ಲ: ಕೆ.ಎಸ್.ಈಶ್ವರಪ್ಪ

Update: 2019-07-06 13:12 GMT

ಬಳ್ಳಾರಿ, ಜು.6: ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಗೂ ಬಿಜೆಪಿಗೂ ಯಾವುದೆ ಸಂಬಂಧವಿಲ್ಲ. ಯಾಕೆ ರಾಜೀನಾಮೆ ಕೊಟ್ಟಿದ್ದಾರೆಂದು ಅವರೇ ಹೇಳಬೇಕೆಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಆಪರೇಷನ್ ಕಮಲ ಅಲ್ಲ. ಆದರೆ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ರಾಷ್ಟ್ರೀಯ ಮುಖಂಡರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರೇ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಬಿಜೆಪಿ ರಾಷ್ಟ್ರೀಯ ನಾಯಕರು ಸೂಚನೆಯ ಮೇರೆಗೆ ನಮ್ಮ ನಡೆ ಇರುತ್ತದೆ. ಹೀಗಾಗಿ ಕಾಂಗ್ರೆಸ್, ಜೆಡಿಎಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕುತೂಹಲದಿಂದ ಗಮನಿಸುತ್ತಿದ್ದೇವೆ. ಸದ್ಯ ನಾವು ರಾಜ್ಯದೆಲ್ಲೆಡೆ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯರಾಗಿದ್ದೇವೆಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News