ಹೊಗೆಯಾಡುತ್ತಿದ್ದ ಆಪರೇಷನ್ ಕಮಲ ಇಂದು ಸ್ಫೋಟವಾಗಿದೆ: ಸಚಿವ ಎಂಟಿಬಿ ನಾಗರಾಜ್

Update: 2019-07-06 14:44 GMT

ಬೆಂಗಳೂರು, ಜು.5: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ 11 ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ವಸತಿ ಸಚಿವ ಎಂಟಿಬಿ ನಾಗರಾಜ್, ಆಪರೇಷನ್ ಕಮಲ ಬಹಳ ದಿನಗಳಿಂದ ಹೊಗೆಯಾಡುತ್ತಿದ್ದು, ಇಂದು ಸ್ಫೋಟವಾಗಿದೆ ಎಂದರು.

ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿಲ್ಲ. ಇದೆಲ್ಲ ಕೇವಲ ಊಹಾಪೋಹ. ಇಂದಿನ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರು ಅತೃಪ್ತ ಶಾಸಕರನ್ನು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಯಾವುದೇ ಕಾರಣಕ್ಕೂ ನಾವು ರಾಜೀನಾಮೆ ನೀಡುವುದಿಲ್ಲ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡೋಣ ಎಂದು ನಾಗರಾಜ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News