ಅಕ್ರಮ ಮರಳು ಸಾಗಾಟ: ಲಾರಿ, ಚಾಲಕ ವಶ
Update: 2019-07-06 15:36 GMT
ಕುಂದಾಪುರ, ಜು.6: ಕುಂದಾಪುರ ಸಂಗಂ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.5ರಂದು ಬೆಳಗ್ಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಕುಂದಾಪುರ ಪೊಲೀಸರು ಚಾಲಕ ಸಹಿತ ವಶಕ್ಕೆ ತೆಗೆದುಕೊಂಡಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯ ಪಟ್ಟಣದ ಚಾಲಕ ಶಿವಕುಮಾರ್ ಎಚ್. ಎಲ್.(22) ಬಂಧಿತ ಆರೋಪಿ. ಅಕ್ರಮವಾಗಿ ಮರಳು ಸಾಗಾಟ ಮಾಡು ತ್ತಿದ್ದ ಲಾರಿ ಮತ್ತು ಅದರಲ್ಲಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇವುಗಳ ಒಟ್ಟು ಮೌಲ್ಯ 6,30,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.