ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2019-07-06 16:41 GMT

ಬೆಂಗಳೂರು, ಜು.6: ಜೀವನ್ ಭೀಮಾನಗರದ ರಕ್ಷಣಾ ಸಂಶೋಧನೆ ಮತ್ತು ಅಭಿವದ್ಧಿ ಸಂಸ್ಥೆಯ (ಡಿಆರ್‌ಡಿಒ) ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ.

ಸುದ್ದಗುಂಟೆಪಾಳ್ಯದ ಲೋಕೇಶ್(22) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.

ಡಿಆರ್‌ಡಿಒದಲ್ಲಿ ಡೋಬಿ ಕೆಲಸದ ಗುತ್ತಿಗೆ ಪಡೆದುಕೊಂಡಿದ್ದ ಲೋಕೇಶ್, ಶುಕ್ರವಾರ ರಾತ್ರಿ 1:15ರ ವೇಳೆ ಭಾಗ್ಮನೆ ಟೆಕ್ ಪಾರ್ಕ್ ಕಡೆಯಿಂದ ಡಿಆರ್‌ಡಿಒ ಸಂಸ್ಥೆ ಒಳಗೆ ಬೈಕ್‌ನಲ್ಲಿ ಹೋಗುವಾಗ ಆಯತಪ್ಪಿ ರಸ್ತೆಬದಿ ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿರುವ ಜೀವನ್ ಭೀಮಾನಗರ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News