ಸಾಲಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ

Update: 2019-07-07 13:28 GMT

ದಾವಣಗೆರೆ, ಜು.7: ಸಾಲಬಾಧೆಯಿಂದ ಬೇಸತ್ತು ರೈತನೋರ್ವ ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಡ್ಯಾಳ್ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. 

ಚನ್ನಬಸಪ್ಪ (32) ಆತ್ಮಹತ್ಯೆಗೈದ ರೈತ. ಚನ್ನಬಸಪ್ಪ ವಿವಿಧ ಕಡೆ ಖಾಸಗಿಯಾಗಿ ಐದು ಲಕ್ಷ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದ್ದು, ಸಾಲಗಾರರ ಕಾಟಕ್ಕೆ ಬೇಸತ್ತು ಶನಿವಾರ ರಾತ್ರಿ ಮನೆಯಿಂದ ಹೋಗಿದ್ದ ಚನ್ನಬಸಪ್ಪ ಭಾನುವಾರ ಬೆಳಿಗ್ಗೆ ಜಮೀನಿನಲ್ಲಿ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. 

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News