ಫಯಾಝ್

Update: 2019-07-07 15:56 GMT

ಪುತ್ತೂರು: ಯುವಕನೋರ್ವ ಅಲ್ಪ ಕಾಲದ ಅಸೌಖ್ಯದಿಂದ ಮೃತಪಟ್ಟಿರುವ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ನಿವಾಸಿ  ಹಮೀದ್ ಎಂಬವರ ಪುತ್ರ ಫಯಾಝ್(19.ವ) ಮೃತ ಯುವಕ.

ವಿದ್ಯಾಭ್ಯಾಸ ಮುಗಿಸಿ ಕೆಲವು ಸಮಯಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಇಂಟೀರಿಯರ್ ಡಿಸೈನ್ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದ ಫಯಾಝ್ ಅವರಿಗೆ ಇತ್ತೀಚೆಗೆ ಕಾಯಿಲೆ ಬಾಧಿಸಿದ್ದರಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಜು.7ರಂದು ಸಂಜೆ ಚಿಕಿತ್ಸೆಗೆ ಸ್ಪಂಧಿಸದ ಅವರು ಮೃತಪಟ್ಟಿದ್ದಾರೆ. ಮೃತ ಫಯಾಝ್‍ರವರು ತಂದೆ, ತಾಯಿ, ತಂಗಿಯನ್ನು ಅಗಲಿದ್ದಾರೆ. ನೂರಾರು ಮಂದಿ ಆಗಮಿಸಿ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ