ಮೋದಿ, ಶಾ ಅಪರೇಷನ್ ಕಮಲದಂತಹ ಕ್ಷುಲ್ಲಕ ರಾಜಕಾರಣಕ್ಕೆ ಕೈ ಹಾಕಲ್ಲ: ಸಂಸದ ಪ್ರತಾಪ್ ಸಿಂಹ

Update: 2019-07-07 16:31 GMT

ಮೈಸೂರು,ಜು,7: ಸಮ್ಮಿಶ್ರ ಸರಕಾರವನ್ನು ಪತನಗೊಳಿಸಲು ಆಪರೇಷನ್ ಕಮಲದಂತ ಕ್ಷುಲ್ಲಕ ರಾಜಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೈ ಹಾಕುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ನನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಮತ್ತು ಅಮಿತ್ ಶಾ ಅಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬುದು ಸುಳ್ಳು, ಕೇಂದ್ರದ ಅಭಿವೃದ್ದಿ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಆಗುತ್ತಿಲ್ಲ, ಹೀಗಾಗಿ ಶಾಸಕರಿಗೆ ಕ್ಷೇತ್ರದಲ್ಲಿ ಮುಖ ತೋರಿಸಲು ಸಹ ಅಗದ ಪರಿಸ್ಥಿತಿ ಇದೆ. ಹಾಗಾಗಿ ಬೇಸರದಿಂದ ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News