ಮುಂಬೈಯಲ್ಲಿ ಕರ್ನಾಟಕದ ಶಾಸಕರು: ಮಹಾರಾಷ್ಟ್ರ ಬಿಜೆಪಿ ಪ್ರತಿಕ್ರಿಯಿಸಿದ್ದು ಹೀಗೆ…

Update: 2019-07-07 16:52 GMT

ಮುಂಬೈ, ಜು.7: ಕರ್ನಾಟಕದ ಕಾಂಗ್ರೆಸ್-ಜೆಡಿಎಸ್‌ನ 10 ಭಿನ್ನಮತೀಯ ಶಾಸಕರು ಮುಂಬೈಯಲ್ಲಿ ಇರುವ ಬಗ್ಗೆ ತಮಗೇನೂ ತಿಳಿದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ವಕ್ತಾರ ಕೇಶವ್ ಉಪಾಧ್ಯಾಯ ಹೇಳಿದ್ದಾರೆ.

ಕರ್ನಾಟಕದ ಯಾವುದೇ ಶಾಸಕರು ಮುಂಬೈಯಲ್ಲಿ ಇರುವ ಬಗ್ಗೆ ತಮಗೆ ತಿಳಿದಿಲ್ಲ. ಅಲ್ಲದೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೂ ನಮಗೂ ಸಂಬಂಧವಿಲ್ಲ ಎಂದು ಉಪಾಧ್ಯಾಯ ಹೇಳಿದ್ದಾರೆ.

  ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ 13 ಶಾಸಕರು ಶನಿವಾರ ರಾಜೀನಾಮೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ರಾಜ್ಯದ ಮೈತ್ರಿ ಸರಕಾರ ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ. ಈ ಮಧ್ಯೆ, 10 ಭಿನ್ನಮತೀಯ ಶಾಸಕರು ಶನಿವಾರ ತಡರಾತ್ರಿ ಖಾಸಗಿ ವಿಮಾನದಲ್ಲಿ ಮುಂಬೈಗೆ ತೆರಳಿ ಅಲ್ಲಿಯ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವುದಾಗಿ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News