ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ: ಝಮೀರ್ ಅಹ್ಮದ್

Update: 2019-07-08 16:16 GMT

ಬೆಂಗಳೂರು, ಜು.8: ವೈಯಕ್ತಿಕ ಹಿತಾಸಕ್ತಿಗಿಂತ ನನಗೆ ನನ್ನ ಪಕ್ಷದ ಮೇಲಿನ ಅಭಿಮಾನ ದೊಡ್ಡದು. ನಾನು ನನ್ನ ಸ್ವಇಚ್ಛೆಯಿಂದ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಹಾಗೂ ಮುಂದಿನ ದಿನಗಳಲ್ಲಿ ಪಕ್ಷ ಕೈಗೊಳ್ಳುವ ಎಲ್ಲ ತೀರ್ಮಾನಕ್ಕೂ ಸಂಪೂರ್ಣ ಬದ್ಧನಿದ್ದೇನೆ. ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಬೇಡ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ.

ದೇಶ ಮೊದಲು, ಪಕ್ಷ ನಂತರ ಹಾಗೂ ವೈಯಕ್ತಿಕ ಹಿತಾಸಕ್ತಿ ಕೊನೆಗೆ ಅನ್ನೋದು ನನ್ನ ಧ್ಯೇಯ. ಹಿಂಬಾಗಿಲ ಮೂಲಕ ಸರಕಾರವನ್ನು ಹೈಜಾಕ್ ಮಾಡುವ ಕೀಳುಮಟ್ಟದ ರಾಜಕಾರಣ ಮಾಡುತ್ತಿರುವ ಕೋಮುವಾದಿ ಬಿಜೆಪಿಯನ್ನು ರಾಜ್ಯದಲ್ಲಿ ದೂರವಿಡಬೇಕಾದ್ದು ಇಂದಿನ ತುರ್ತು ಅಗತ್ಯವಾಗಿದೆ. ಸಮ್ಮಿಶ್ರ ಸರಕಾರವನ್ನು ಉಳಿಸಬೇಕೆಂಬ ಉದ್ದೇಶದಿಂದ ಸ್ವ ಇಚ್ಛೆಯಿಂದ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News