ಬ್ರಹ್ಮಾವರ: ಶಿಕ್ಷಕರ ಸಹಾರಿ ಸಂಘದ ನವೀಕೃತ ಶಾಖೆ ಆರಂಭ

Update: 2019-07-08 17:57 GMT

ಉಡುಪಿ, ಜು.8: ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘದ ನವೀಕೃತ ಶಾಖೆ ಇತ್ತೀಚೆಗೆ ಬ್ರಹ್ಮಾವರದ ಸೈಂಟ್ ಅಂತೋನಿ ಪ್ರೆಸ್ ಪಾಯಿಂಟ್‌ನ ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭಗೊಂಡಿತು.

ಸಂಘದ ಅಧ್ಯಕ್ಷ ಸಿ.ಪ್ರಭಾಕರ ಶೆಟ್ಟಿ ನೇತೃತ್ವದಲ್ಲಿ ನವೀಕರಣಗೊಂಡಿತ್ತು. ಈ ಶಾಖೆಯಲ್ಲಿ 528 ಸದಸ್ಯರಿದ್ದು, ಸಂಘದಲ್ಲಿ ಒಟ್ಟು 4146 ಸದಸ್ಯರಿದ್ದಾರೆ. ಸಂಘದ ಒಟ್ಟು ವ್ಯವಹಾರ ಸುಮಾರು 65 ಕೋಟಿ ರೂ. ಆಗಿದೆ. ಇದೀಗ ನವೀಕರಣಗೊಂಡಿರುವ ಸಂಘದ ಶಾಖಾ ಕಚೇರಿಯಲ್ಲಿ ಜಿಲ್ಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಬಂಧುಗಳು ಸದಸ್ಯರಾಗಿ ಆರ್ಥಿಕ ಸೌಲ್ಯ ಪಡೆದು ಕೊಳ್ಳಬಹುು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News