ಪೌತಿ ಖಾತೆ ಹೊಂದಿರುವ ರೈತರಿಗೂ ಕಿಸಾನ್ ಸಮ್ಮಾನ್ ಯೋಜನೆ: ಮಂಡ್ಯ ಡಿಸಿ

Update: 2019-07-09 17:00 GMT

ಮಂಡ್ಯ, ಜು.9: ಪೌತಿ ಖಾತೆಯನ್ನು ಹೊಂದಿರುವ ರೈತ ಕುಟುಂಬಗಳು ಸಹ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಅರ್ಹವಾಗಿವೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ. 

ಪೌತಿ ಖಾತೆಯ ರೈತ ಕುಟುಂಬಗಳು ಆಧಾರ್ ಪ್ರತಿ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ಸ್ವಯಂ ಘೋಷಣಾ ಪತ್ರದೊಂದಿಗೆ ಹತ್ತಿರದ ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರ ಮತ್ತು ನಾಡಕಛೇರಿಗೆ ನೀಡಬಹುದು ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News