ಜೆಡಿಎಸ್ ಶಾಸಕರು ತಂಗಿದ ರೆಸಾರ್ಟ್ ಸುತ್ತಲೂ ಬಿಗಿ ಭದ್ರತೆ ಹೆಚ್ಚಳ

Update: 2019-07-09 17:12 GMT

ಬೆಂಗಳೂರು, ಜು.9: ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಂದಿಬೆಟ್ಟ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಶಾಸಕರು ವಾಸ್ತವ್ಯ ಹೂಡಿರುವ ರೆಸಾರ್ಟ್ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ. ಯಾವುದೇ ಖಾಸಗಿ ವಾಹನಗಳಿಗೆ ಗೇಟ್ ಒಳಗೆ ಹೋಗದಂತೆ ನಿರ್ಬಂಧ ಹೇರಲಾಗಿದ್ದು, ಅನುಮತಿಯಿಲ್ಲದೇ ಪ್ರವೇಶ ನಿಷೇಧಿಸಲಾಗಿದೆ.

ವಿಜಯಪುರ, ಚನ್ನರಾಯಪಟ್ಟಣ, ವಿಶ್ವನಾಥಪುರ, ದೊಡ್ಡಬೆಳವಂಗಲ ಮತ್ತು ರಾಜಾನುಕುಂಟೆ ಠಾಣೆಗಳ ಪೋಲಿಸರು ಭದ್ರತೆಯ ಜವಾಬ್ದಾರಿ ಹೊತ್ತಿದ್ದು, ಐದು ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News