ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯ

Update: 2019-07-09 17:17 GMT

ಬೆಂಗಳೂರು, ಜು.9: ಸಮ್ಮಿಶ್ರ ಸರಕಾರದ ಶಾಸಕರು ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತ ಕುಸಿದು ಸಾರ್ವಜನಿಕ ಕೆಲಸ ಸ್ಥಗಿತಗೊಂಡಿವೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕೆಂದು ರಾಜ್ಯ ಶಿವಸೇನಾ ಅಧ್ಯಕ್ಷ ರುಕ್ಮಾಂಗದ ಒತ್ತಾಯಿಸಿದ್ದಾರೆ.

ಆಡಳಿತ ಹಾಗೂ ವಿರೋಧ ಪಕ್ಷಗಳು ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಜು.10ರಂದು ಬೆಳಗ್ಗೆ 11ಕ್ಕೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯಪಾಲರಿಗೆ ಮನವಿ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News