ಕಿರುಕುಳ ನೀಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ

Update: 2019-07-09 17:39 GMT

ಬೆಂಗಳೂರು, ಜು.9: ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಯಡತಾಡಿಯ ಸ್ವಾಗತ್ ಹೆಸರಿನ ಮದ್ಯದಂಗಡಿ ಮಾಲಕರು ಹಾಗೂ ಸಿಬ್ಬಂದಿಗೆ ಕಿರುಕುಳ ನೀಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮದ್ಯ ಮಾರಾಟಗಾರರ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, ಮದ್ಯ ಅಂಗಡಿಗಳ ಮೇಲೆ ದಾಳಿ ಮಾಡುವ ಕಿರುಕುಳ ನೀಡುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನಮಗೆ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿದರು.

ಮದ್ಯ ಮಾರಾಟಗಾರ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲೆ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರ ವಿರುದ್ಧ ಅಬಕಾರಿ ಅಧಿಕಾರಿ ನೀಡಿರುವ ಸುಳ್ಳು ದೂರು ಕುರಿತು ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಎಸ್.ಗುರುಸ್ವಾಮಿ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News