ಲಾರಿ-ಬೈಕ್ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು
Update: 2019-07-09 18:10 GMT
ಹರಿಹರ, ಜು.9: ಲಾರಿ ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಹರಪನಹಳ್ಳಿಯ ರಸ್ತೆಯ ರೈಲ್ವೆ ಬ್ರಿಡ್ಜ್ ಕೆಳಗೆ ನಡೆದಿದೆ.
ಧನುಷ್ (19) ಮೃತಪಟ್ಟ ಬೈಕ್ ಸವಾರ. ಮಂಗಳವಾರ ಬೆಳಗ್ಗೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿ ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಧನುಷ್ ಸಹೋದರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕರು ಈರಣ್ಣ ಸಿದ್ದಪ್ಪ ಗುರುನಾಥ್, ಪಿಎಸ್ಐ ಪ್ರಭು ಡಿ.ಕೆ, ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.