ವೇಶ್ಯಾವಾಟಿಕೆ ಅಡ್ಡೆಗೆ ದಾಳಿ: ಐವರ ಬಂಧನ, 5 ಮಹಿಳೆಯರ ರಕ್ಷಣೆ

Update: 2019-07-09 18:14 GMT

ಮೈಸೂರು,ಜು.9: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು, ಐವರು ಮಹಿಳೆಯರನ್ನು ರಕ್ಷಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮುಂಡಿಬೆಟ್ಟದ ತಪ್ಪಲಿನ ಏಳಿಗೆ ಹುಂಡಿಯಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆಯೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಯರಗನಹಳ್ಳಿಯ ನಾಗೇಶ್ ಎಂಬಾತನನ್ನು ಬಂಧಿಸಿದ್ದು, ರಾಜೇಶ್ ಎಂಬಾತ ಪರಾರಿಯಾಗಿದ್ದಾನೆ. ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ, ಹಡಜನ ಗ್ರಾಮದ ಬಳಿ ಹೆರಿಟೇಜ್ ನಗರದಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಿದ ನಾಲ್ವರನ್ನು ಬಂಧಿಸಿದ್ದು, ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಇವರಲ್ಲಿ ಆಂಧ್ರಪ್ರದೇಶಕ್ಕೆ ಸೇರಿದವರೂ ಇದ್ದಾರೆ.

ಮೈಸೂರು ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಕರೀಂ ರಾವತ್, ಎಸ್ಐ ಗಳಾದ ಜಯಪ್ರಕಾಶ್, ಕೃಷ್ಣಮೂರ್ತಿ, ಸಿಬ್ಬಂದಿಗಳಾದ ದಾಕ್ಷಾಯಿಣಿ, ನಂಜುಂಡಸ್ವಾಮಿ, ಜವೂರ್, ಹರೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News