ಆಪರೇಷನ್ ಕಮಲ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್ –ಜೆಡಿಎಸ್ ನಾಯಕರು
Update: 2019-07-10 15:16 IST
ಬೆಂಗಳೂರು , ಜು. 10: ಬಿಜೆಪಿ ಆಪರೇಷನ್ ಕಮಲ ಖಂಡಿಸಿ ಕಾಂಗ್ರೆಸ್ -ಜೆಡಿಎಸ್ ನ ಹಿರಿಯ ನಾಯಕರು ಬೀದಿಗಳಿದು ಪ್ರತಿಭಟನೆ ನಡೆಸಿದ್ದಾರೆ. ಜೆಡಿಎಸ್ ವರಿಷ್ಠಎಚ್.ಡಿ.ದೇವೇಗೌಡ, ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್, ಕೆ.ಸಿ.ವೇಣುಗೋಪಾಲ್ , ಸಿದ್ದರಾಮಯ್ಯ ,ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ರಾಜಭವನದ ಮುಂದೆ ರಸ್ತೆಯಲ್ಲಿ ಕುಳಿತು ಉಭಯ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠರಾದ ಎಚ್ .ಡಿ.ದೇವೇಗೌಡ ಅವರು ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿದೆ. ಸರಕಾರವನ್ನು ಉರುಳಿಸಲು ಯತ್ನ ನಡೆಸಿದೆ ಎಂದು ಆರೋಪಿಸಿದರು.