ಜು.15ರವರೆಗೆ ಯಾವುದೇ ತೀರ್ಮಾನವಿಲ್ಲ: ರಾಮಲಿಂಗಾರೆಡ್ಡಿ

Update: 2019-07-10 16:39 GMT

ಬೆಂಗಳೂರು, ಜು.10: ಸ್ಪೀಕರ್ ರಮೇಶ್‌ಕುಮಾರ್ ಜು.15ರಂದು ತಮ್ಮನ್ನು ಭೇಟಿಯಾಗುವಂತೆ ಹೇಳಿದ್ದು, ಅಲ್ಲಿಯವರೆಗೆ ರಾಜಕೀಯ ಹೇಳಿಕೆ ನೀಡುವುದಿಲ್ಲವೆಂದು ಶಾಸಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜೀನಾಮೆಯನ್ನು ಸ್ಪೀಕರ್ ರಮೇಶ್‌ಕುಮಾರ್ ಅಂಗೀಕರಿಸಿಲ್ಲ. ಅವರು ಕರೆದು ನನ್ನೊಂದಿಗೆ ಮಾತನಾಡುವವರೆಗೆ ಯಾವುದೆ ಹೇಳಿಕೆಗಳನ್ನು ನೀಡುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News