ಯುವಕ ಅನುಮಾನಾಸ್ಪದ ಸಾವು: ಕೊಲೆ ಶಂಕೆ

Update: 2019-07-10 17:29 GMT

ಮೈಸೂರು,ಜು.10: ಅನುಮಾನಾಸ್ಪದವಾಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕಡಕೋಳ ಬಳಿಯ ಮರಸೆ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕ ಕಿರಣ್ ಕುಮಾರ್(18) ಎಂದು ತಿಳಿದು ಬಂದಿದೆ. ಈಗ ಮರಸೆ ಗ್ರಾಮದ ನಿವಾಸಿಯಾಗಿದ್ದು, ನಿನ್ನೆ ಮನೆಯಿಂದ ಹೊರಗೆ ಹೋಗಿದ್ದ ಈತ ವಾಪಸ್ ಮನೆಗೆ ಬಂದಿರಲಿಲ್ಲ, ಇಂದು ಕಡಕೋಳ ಗ್ರಾಮದ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದೆ. 

ಆತನ ಸಾವು ಸಹಜವಲ್ಲ, ಆತನನ್ನು ಯಾರೊ ಕೊಲೆ ಮಾಡಿದ್ದಾರೆ ಎಂದು ಪೋಷಕರು ದೂರು ನೀಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News