ಶಾಸಕ ಗೋಪಾಲಯ್ಯ ಪಕ್ಷ ಸೇರ್ಪಡೆ ಬೇಡ: ಬಿಜೆಪಿ ಕಾರ್ಯಕರ್ತರಿಂದ ಬಿಎಸ್‌ವೈಗೆ ಮನವಿ

Update: 2019-07-11 17:57 GMT

ಬೆಂಗಳೂರು, ಜು.11: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಗರದ ಮಹಾಲಕ್ಷ್ಮಿ ಲೇಔಟ್‌ನ ಜೆಡಿಎಸ್ ಶಾಸಕ ಗೋಪಾಲಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳದಂತೆ ಬಿಜೆಪಿ ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.

ಈ ಕುರಿತು ಎರಡು ಪುಟಗಳ ಮನವಿ ಪತ್ರ ಸಲ್ಲಿಸಿರುವ ಬಿಜೆಪಿ ಕಾಯಕರ್ತರು, 1996ರಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಿಸಿದ ಆರೋಪ ಅವರ ಮೇಲಿದೆ. ಹಾಗೂ ಅವರು ಅಪರಾಧ ಹಿನ್ನೆಲೆ ಉಳ್ಳವರಾಗಿದ್ದಾರೆ. ಹೀಗಾಗಿ ಯಾವುದೆ ಕಾರಣಕ್ಕೂ ಅವರು ಬಿಜೆಪಿಗೆ ಸೇರ್ಪಡೆ ಬೇಡವೆಂದು ಒತ್ತಾಯ ಮಾಡಿದ್ದಾರೆ. ಒಂದು ವೇಳೆ ಗೋಪಾಲಯ್ಯ ಬಿಜೆಪಿಗೆ ಸೇರ್ಪಡೆಯಾದರೆ, ಬಿಜೆಪಿ ಸಿದ್ಧಾಂತಕ್ಕೆ ಬೆಲೆ ಇಲ್ಲದಂತಾಗುತ್ತದೆ. ಕೇವಲ ಮಂತ್ರಿ ಪದವಿಯ ಆಸೆಗಾಗಿ ಬಿಜೆಪಿಗೆ ಸೇರ್ಪಡೆ ಯಾಗುತ್ತಿದ್ದಾರೆ. ಇಂತಹ ನಾಯಕರು ಬಿಜೆಪಿಗೆ ಬಂದರೆ ಪಕ್ಷದಲ್ಲಿ ಸಮಸ್ಯೆಗಳು ಉದ್ಭವಿಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News