ಸುಪ್ರೀಂ ಕದ ತಟ್ಟಿದ ಯೂತ್ ಕಾಂಗ್ರೆಸ್
Update: 2019-07-12 05:43 GMT
ಹೊಸದಿಲ್ಲಿ, ಜು.12: ರಾಜೀನಾಮೆ ನೀಡಿರುವ ಅತೃಪ್ತ ಶಾಸಕರನ್ನು ಅನಹರ್ಗೊಳಿಸುವಂತೆ ಯುವ ಕಾಂಗ್ರೆಸ್ ಇಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ರಾಜೀನಾಮೆ ನೀಡಿರುವ ಶಾಸಕರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸುವಂತೆ ಯೂತ್ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ. ಇದರಿಂದಾಗಿ ಅತೃಪ್ತ ಶಾಸಕರಿಗೆ ಹೊಸ ತಲೆನೋವು ಶುರುವಾಗಿದೆ.