ಬುಧವಾರವೇ ಬಹುಮತ ಸಾಬೀತುಪಡಿಸಲು ಸಿದ್ಧ: ಸಿಎಂ ಕುಮಾರಸ್ವಾಮಿ

Update: 2019-07-12 12:18 GMT

ಬೆಂಗಳೂರು, ಜು.12: ಬುಧವಾರವೇ ವಿಧಾನ ಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ನೀಡುವಂತೆ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ  ಸಲಹಾ ಸಮಿತಿ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಮಂಗಳವಾರ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಬುಧವಾರ ಬಹುಮತ ಸಾಬೀತುಪಡಿಸಲು ತಾನು ಸಿದ್ಧನಿರುವುದಾಗಿ  ಸಿಎಂ   ಕುಮಾರಸ್ವಾಮಿ ಹೇಳಿದ್ದಾರೆ.ಈ  ಮೊದಲು ಸದನದಲ್ಲಿ ವಿಶ್ವಾಸಮತ ಯಾಚನೆಗೆ ಸಮಯ ನಿಗದಿಪಡಿಸುವಂತೆ ಸ್ಪೀಕರ್ ಗೆ ಸಿಎಂ ಎಚ್ ಡಿ ಕುಮಾರಸ್ವಾಮಿ   ಮನವಿ ಮಾಡಿದ್ದರು. 

ಸಲಹಾ ಸಮಿತಿ ಸಭೆಯಲ್ಲಿ ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ ಭಾಗವಹಿಸಿರಲಿಲ್ಲ. ವಿಪಕ್ಷ ನಾಯಕನ ಅನುಪಸ್ಥಿತಿಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಾಡಿಕೆ ಇಲ್ಲ  ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News