×
Ad

ಖಾದಿ ಗ್ರಾಮೋದ್ಯೋಗ ಮಂಡಳಿಯಿಂದ ಮುಖ್ಯಮಂತ್ರಿ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ

Update: 2019-07-12 21:26 IST

ಉಡುಪಿ, ಜು.12: 2019-2020ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿಎಂಇಜಿಪಿ)ಯಡಿ ಸ್ವಉದ್ಯೋಗ ಆರಂಭಿ ಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯನ್ನು ರಾಜ್ಯ ಸರಕಾರ ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸುತ್ತಿದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 10 ಲಕ್ಷ ರೂ.ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ, ಉತ್ಪಾದನೆ, ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಪ್ರಸ್ತುತ ಹೊಂದಿರುವ ಚಟುವಟಿಕೆ/ ಘಟಕಗಳ ವಿಸ್ತರಣೆಗೆ ಅವಕಾಶ ಇರುವುದಿಲ್ಲ. ಯೋಜನಾ ವೆಚ್ಚದ ಶೇ.25ರಿಂದ 35ರವರೆಗೆ ಸಹಾಯಧನ ನೀಡಲಾಗುವುದು.

ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿದಾರ ರಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ವಯೋಮಿತಿಯು ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ ಹಾಗೂ ವಿಶೇಷ ವರ್ಗದವರಿಗೆ ಗರಿಷ್ಠ 45 ವರ್ಷ (ಮಹಿಳೆ/ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು/ಮಾಜಿಯೋಧರು/ಅಂಗವಿಕಲರು).ನಿರುದ್ಯೋಗಿ ಯುವಕ /ಯುವತಿಯರು ವೆಬ್‌ಸೈಟ್-http://cmegp.kar.nic.in -ಮೂಲಕ ಆನ್‌ಲೈನ್ಲ್ಲಿ ಅರ್ಜಿಯನ್ನು ನೊಂದಾಯಿಸಬೇಕು.

ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಯಾವುದೇ ಯೋಜನೆ ಯಲ್ಲಿ ಸಹಾಯಧನ ಪಡೆದವರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಈ ಯೋಜನೆಯಲ್ಲಿ ಯಾವುದೇ ಆದಾಯ ಮಿತಿ ಇರುವುದಿಲ್ಲ. ಸರಕಾರದ ನಿಯಮಾನುಸಾರ ವಿಶೇಷ ವರ್ಗದ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು. ಅ್ಯರ್ಥಿಗಳಿಗೆ ಒಂದುವಾರದ ಉದ್ಯಮಶೀಲತಾ ತರಬೇತಿ ಪಡೆಯುವುದು ಕಡ್ಡಾಯವಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆ.31ರವರೆಗೆ ಅವಕಾಶವಿದೆ. ಅರ್ಜಿಯ ಪ್ರತಿಯನ್ನು ನಿಗದಿತ ದಾಖಲಾತಿಗಳೊಂದಿಗೆ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(ಕೆವಿಐಬಿ), ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಗೆ ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆ.31ರವರೆಗೆ ಅವಕಾಶವಿದೆ. ಅರ್ಜಿಯ ಪ್ರತಿಯನ್ನು ನಿಗದಿತ ದಾಖಲಾತಿಗಳೊಂದಿಗೆ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(ಕೆವಿಐಬಿ), ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(ಕೆವಿಐಬಿ), ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂ: 0820-2574855) ಕಚೇರಿಯಲ್ಲಿ ಪಡೆಯಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (ಕೆವಿಐಬಿ), ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂ: 0820-2574855) ಕಚೇರಿಯಲ್ಲಿ ಪಡೆಯಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News