ಎನ್.ಕೃಷ್ಣೇಗೌಡಗೆ ಅತ್ಯುತ್ತಮ ವರದಿಗಾರ ಪ್ರಶಸ್ತಿ

Update: 2019-07-12 16:07 GMT

ಪಾಂಡವಪುರ, ಜು.12: ತಾಲೂಕಿನ ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪ್ರೆಸ್‍ಕ್ಲಬ್ ಆಫ್ ಪಾಂಡವಪುರ ಘಟಕದ ಸಂಸ್ಥಾಪಕ ಅಧ್ಯಕ್ಷ ಎನ್.ಕೃಷ್ಣೇಗೌಡ ಅವರಿಗೆ  ಜಿಲ್ಲೆಯ ಅತ್ಯುತ್ತಮ ವರದಿಗಾರ ರಾಜ್ಯಮಟ್ಟದ ಪ್ರಶಸ್ತಿ ದೊರೆತಿದೆ.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಂಗಳೂರು ಇವರ ಸಹಯೋಗದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಈಚೆಗೆ ನಡೆದ ಪತ್ರಕರ್ತರ ಕಾರ್ಯಾಗಾರ ಹಾಗೂ ಫೋಟೋ ಟುಡೇ ವಸ್ತುಪ್ರದರ್ಶನದಲ್ಲಿ ಜಿಲ್ಲಾ ಹಾಗೂ ಗ್ರಾಮೀಣ ಪ್ರದೇಶದಲ್ಲಿ 25 ವರ್ಷಗಳವರೆಗೆ ಪತ್ರಿಕಾ ಕ್ಷೇತ್ರದಲ್ಲಿ ಸೇವೆಗೈದ ಹಿನ್ನೆಲೆಯಲ್ಲಿ ಎನ್.ಕೃಷ್ಣೇಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಜಿ ಸಚಿವ ಎಚ್.ವಿಶ್ವನಾಥ್, ವಾರ್ತಾ ಮತ್ತು ಪ್ರಚಾರ ಇಲಾಖೆ ನಿರ್ದೇಶಕ ಭೃಂಗೇಶ್, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯಾಧ್ಯಕ್ಷ ಬಿ.ನಾರಾಯಣ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News