ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

Update: 2019-07-12 16:33 GMT

ಮೈಸೂರು,ಜು.12: ಒಂದು ದಿನದ ಕಾರ್ಯಕ್ರಮದ ನಿಮಿತ್ತ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶುಕ್ರವಾರ ಸಂಜೆ ಮೈಸೂರಿಗೆ ಆಗಮಿಸಿದರು.

ಜು.13 ರ ಶನಿವಾರ ಪ್ರಾದೇಶಿಕ ಸಂಸ್ಥೆ (ಆರ್.ಐ.ಐ) ಮತ್ತು ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ((ಸಿ.ಐ.ಐ.ಎಲ್)ನಲ್ಲಿ ಆಯೋಜಿಸಿರು ಕಾರ್ಯಕ್ರಮದಲ್ಲಿ ಭಾಗವಹಿಸವರು.

ಇಂದು ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯು ಸೇನಾ ವಿಶೇಷ ವಿಮಾನದಲ್ಲಿ ಪತ್ನಿ ಸಮೇತ ಆಗಮಿಸಿದರು.

ಉಪರಾಷ್ಟ್ರಪತಿಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಮೇಯರ್ ಪುಷ್ಪಲತಾ ಜಗನ್ನಾಥ್ ಪುಷ್ಪಗುಚ್ಚ ನೀಡುವ ಮೂಲಕ ಬರಮಾಡಿಕೊಂಡರು.

ಇದೇ ವೇಳೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಪೊಲೀಸ್ ಅಧೀಕ್ಷಕ ರಿಶ್ಯಂತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News