ಬೆಳ್ತಂಗಡಿಯಲ್ಲಿ ಬಾಲಕಿಯ ಅತ್ಯಾಚಾರ: ಆರೋಪಿ ಸೆರೆ

Update: 2019-07-12 17:07 GMT

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ನಗರ ನಿವಾಸಿಯೋರ್ವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಬಾಲಕಿ ಗರ್ಭಿಣಿಯಾದ ಕಾರಣ ಮದುವೆಯಾಗುವಂತೆ ಒತ್ತಾಯಿಸಿದಕ್ಕಾಗಿ ಕೊಲೆ ಬೆದರಿಕೆ ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬಂಧಿತ ಆರೋಪಿಯನ್ನು ಸ್ಥಳಿಯ ನಿವಾಸಿ ಅಶ್ವತ್  ಎಂದು ಗುರುತಿಸಲಾಗಿದ್ದು, ಆತನನ್ನು ಧರ್ಮಸ್ಥಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2019ರ ಮಾಚ್ ನಲ್ಲಿ  ಆರೋಪಿ ಅಶ್ವತ್ ಬಾಲಕಿಯ ಮನೆಯವರೊಂದಿಗೆ ಸ್ನೇಹ ಬೆಳೆಸಿ, ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆನ್ನಲಾಗಿದೆ. ಬಾಲಕಿಯ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News