ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುತ್ತೇನೆ: ರಾಮಲಿಂಗಾರೆಡ್ಡಿ
Update: 2019-07-13 05:42 GMT
ಬೆಂಗಳೂರು, ಜು.13: ಸ್ಪೀಕರ್ ಅವರು ಜು.15ರಂದು ನಮ್ಮನ್ನು ಕರೆದಿದ್ದಾರೆ. ಅಲ್ಲಿಯವರೆಗೆ ಯಾವುದೇ ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳುವುದಿಲ್ಲ, ಮಾತನಾಡುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾರ ರೆಡ್ಡಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಶಾಸಕರನ್ನು ರಾಜೀನಾಮೆ ಕೊಡುವಂತೆ ಹೇಳಿಲ್ಲ. ವಿಧಾನಸಭಾ ಅಧಿವೇಶನದಲ್ಲೂ ಭಾಗಿಯಾಗುತ್ತೇನೆ ಎಂದು ಸ್ಪಷ್ಟಪಡಿಸಿದರು.