ಮರಳು ಅಕ್ರಮ ಸಾಗಾಟ: ಲಾರಿ ಸಹಿತ ಸೊತ್ತು ವಶ

Update: 2019-07-13 11:05 GMT

ಮಂಗಳೂರು, ಜು.13: ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮರಳು ಸಹಿತ ಲಾರಿಯೊಂದನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಡೀಲ್ ಜಂಕ್ಷನ್‌ನಲ್ಲಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಲಾರಿ ಮತ್ತು ಮರಳನ್ನು ಸ್ವಾಧೀನಡಿಸಿಕೊಂಡಿರುವ ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಿದ್ದಾರೆ.

 ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಪತ್ತೆ ಕಾರ್ಯಾಚರಣೆಯು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್‌ಠಾಣೆಯ ಪೊಲೀಸ್ ನಿರೀಕ್ಷಕ ಅಶೋಕ ಪಿ. ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಪ್ರದೀಪ್ ಟಿ.ಆರ್. ಮತ್ತು ಠಾಣಾ ಸಿಬ್ಬಂದಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News