ಒಗ್ಗಟ್ಟಿನಿಂದ ಮುನ್ನಡೆಯಲು ತೀರ್ಮಾನಿಸಿದ್ದೇವೆ: ಸಚಿವ ಡಿ.ಕೆ.ಶಿವಕುಮಾರ್

Update: 2019-07-13 12:41 GMT

ಬೆಂಗಳೂರು, ಜು.13: ನಾವು ಸದಾ ಜೊತೆಗಿರೋಣ, ಜೊತೆಗೆ ಸಾಯೋಣ. ಹಳೆಯದನ್ನು ಮರೆತು ಒಗ್ಗಟ್ಟಿನಿಂದ ಮುನ್ನಡೆಯುವ ತೀರ್ಮಾನ ಮಾಡಿದ್ದೇವೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿಂದು ಎಂಟಿಬಿ ನಾಗರಾಜ್ ಜೊತೆಗೆ ಸುದೀರ್ಘ ಮಾತುಕತೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಟಿಬಿ ನಾಗರಾಜ್ ಕಷ್ಟದ ಸಂದರ್ಭದಲ್ಲಿ ಪಕ್ಷವನ್ನು ಹಾಗೂ ಪಕ್ಷದ ಕಾರ್ಯಕರ್ತರು ಕಾಪಾಡಿದ್ದಾರೆ. ಅವರಿಗೆ ಪಕ್ಷದಲ್ಲಿ ಸುದೀರ್ಘ ವರ್ಷಗಳ ಕಾಲ ದುಡಿದಿದ್ದಾರೆ. ಹೀಗಾಗಿ, ಏನೇ ಆಗಲಿ ಪಕ್ಷದಲ್ಲಿಯೇ ಇದ್ದು ಮಾಡೋಣ ಎಂಬ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಯೊಂದಿಗೆ ಅವರಿಗಿರುವ ಭಿನ್ನಾಭಿಪ್ರಾಯಗಳನ್ನು ಹೇಳಿದ್ದಾರೆ. ಅವರ ಎಲ್ಲ ಅಸಮಾಧಾನಗಳಿಗೂ ಸ್ಪಂದಿಸಲು ನಾನು ಹಾಗೂ ಉಪ ಮುಖ್ಯಮಂತ್ರಿ ಪರಮೇಶ್ವರ್ ಜವಾಬ್ದಾರಿ ತೆಗೆದುಕೊಂಡಿದ್ದೇವೆ. ಸುಧಾಕರ್‌ರನ್ನು ಸಿದ್ದರಾಮಯ್ಯಗೆ ಭೇಟಿ ಮಾಡಿಸುವ ಭರವಸೆಯನ್ನು ಎಂಟಿಬಿ ನೀಡಿದ್ದಾರೆ. ನಮ್ಮ ಹಿಂದಿನ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News