ಶಾಸಕ ಸ್ಥಾನಕ್ಕೆ ರಾಜೀನಾಮೆ‌‌ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ಇಲ್ಲ: ರಾಮಲಿಂಗಾರೆಡ್ಡಿ

Update: 2019-07-14 04:20 GMT

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ‌‌ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ‌ನೀಡಲ್ಲ. ವಾಪಾಸ್ ತೆಗೆದುಕೊಳ್ಳುವುದು ಬೇಡವೋ ಎಂಬ ಬಗ್ಗೆ‌ ನಿರ್ಧಾರ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ‌ಹೇಳಿಕೆ ನೀಡಿದ್ದಾರೆ.

ತಮ್ಮ ಪುತ್ರಿ ಸೌಮ್ಯ ರೆಡ್ಡಿ ಯಾವುದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರರು. ನನಗೆ ರಾಜೀನಾಮೆ ವಾಪಾಸ್ ಪಡೆಯದಂತೆ ಬಿಜೆಪಿ ನಾಯಕರು ಒತ್ತಡ ಹೇರಿದ್ದಾರೆ ಎಂಬುದು ಸತ್ಯಕ್ಕೆ ದೂರವಾದದ್ದು, ನನಗೆ ಎಲ್ಲ ಪಕ್ಷದಲ್ಲಿ ಸ್ನೇಹಿತರಿದ್ದಾರೆ. ಎಲ್ಲರೂ ಭೇಟಿಯಾಗುತ್ತಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News