ಕಟೀಲು ದೇವಸ್ಥಾನದಲ್ಲಿ ಅಸಭ್ಯವಾಗಿ ವರ್ತಿಸಿದ ಸಚಿವ ಎಚ್.ಡಿ ರೇವಣ್ಣ ?
Update: 2019-07-14 12:23 GMT
ಮಂಗಳೂರು : ಸಚಿವ ಎಚ್.ಡಿ ರೇವಣ್ಣ ಅವರು ಕಟೀಲು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ವೇಳೆ ಪತ್ರಕರ್ತರನ್ನು ನಿಂದಿಸಿದ್ದಾರೆ ಎನ್ನಲಾದ ವೀಡಿಯೊ ವೈರಲ್ ಆಗಿದೆ.
ಫೋಟೋ ತೆಗೆಯುತ್ತಿದ್ದ, ವಿಡಿಯೋ ಮಾಡುತ್ತಿದ್ದ ಪತ್ರಕರ್ತರನ್ನು ನಿಂದಿಸಿದ್ದಾರೆ ಎನ್ನಲಾಗಿದ್ದು, ದೇವಸ್ಥಾನದೊಳಗೇ ರೇವಣ್ಣ ಅವರು ಆಡಿದ ಮಾತುಗಳು ಆಕ್ರೋಶಕ್ಕೆ ಕಾರಣ ಆಗಿದೆ. ಇದರ ಜತೆಗೆ ಪೊಲೀಸರಿಗೆ ಸೂಚನೆ ನೀಡಿ, ಫೋಟೋ- ವಿಡಿಯೋ ಕೂಡ ಡಿಲೀಟ್ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.