ರಾಮಲಿಂಗಾರೆಡ್ಡಿ ಮನವೊಲಿಕೆಗೆ ಮೈತ್ರಿ ಮುಖಂಡರ ದೌಡು
ಬೆಂಗಳೂರು, ಜು. 14: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತರ ಮನವೊಲಿಕೆಗೆ ಹರಸಾಹಸಪಟ್ಟರೂ ಶಾಸಕರು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಮುಖಂಡರು ರಾಮಲಿಂಗಾರೆಡ್ಡಿ ಮನವೊಲಿಕೆಗೆ ಮುಂದಾಗಿದ್ದಾರೆ.
ರವಿವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು, ರೆಡ್ಡಿ ಅವರ ಜತೆ ಮಾತುಕತೆ ನಡೆಸಿದರು.
ಬೆಂಗಳೂರು ಹೊರ ವಲಯದ ಆನೇಕಲ್ ಸಮೀಪದ ಶೆಟ್ಟಿಹಳ್ಳಿಯಲ್ಲಿ ರಾಮಲಿಂಗಾರೆಡ್ಡಿ ನಿವಾಸಕ್ಕೆ ಖುದ್ದು ಭೇಟಿ ನೀಡಿದ ಮುಖಂಡರು ರಾಜೀನಾಮೆ ಹಿಂಪಡೆಯುವುದು ಹಾಗೂ ಮುಂಬೈನಲ್ಲಿ ಬೀಡು ಬಿಟ್ಟಿರುವ ಅತೃಪ್ತ ಶಾಸಕರ ಮನವೋಲಿಕೆ ಸಂಬಂಧ ಸುಮಾರು 1ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆಂದು ಗೊತ್ತಾಗಿದೆ.