ರಾಜೀನಾಮೆ ಅಂಗೀಕಾರವಾಗಿಲ್ಲ,ನಾನು ಸದನದ ಸದಸ್ಯ : ರಾಮಲಿಂಗಾ ರೆಡ್ಡಿ

Update: 2019-07-15 05:02 GMT

ಬೆಂಗಳೂರು, ಜು.15: ರಾಜೀನಾಮೆ ಅಂಗೀಕಾರವಾಗಿಲ್ಲ. ನಾನು ಸದನದ ಸದಸ್ಯ. ಅಧಿವೇಶನಕ್ಕೆ ಹಾಜರಾಗುತ್ತೇನೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಇಂದು ಸಂಜೆ ಸ್ಪೀಕರ್  ರಮೇಶ್ ಕುಮಾರ್ ಅವರನ್ನು ಭೇಟಿಯಾಗುತ್ತೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕರು ತಮ್ಮನ್ನು ಭೇಟಿಯಾಗಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಏನು ಚರ್ಚೆ ನಡೆದಿದೆ ಎಂದು ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News