ಸೊರಬ: ಅನುಮನಾಸ್ಪದವಾಗಿ ಯುವತಿ ಮೃತ್ಯು

Update: 2019-07-15 11:29 GMT

ಸೊರಬ: ಅನುಮನಾಸ್ಪದವಾಗಿ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ಸೋಮವಾರ ನಡೆದಿದೆ. 

ಇಲ್ಲಿನ ಶ್ರೀ ರಂಗನಾಥ ಹಿ.ಪ್ರಾ. ಶಾಲೆ ಹಿಂಭಾಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಅಡುಗೆ ಸಿಬ್ಬಂದಿಯಾಗಿದ್ದ ಅಶ್ವಿನಿ ಕಲ್ಲಹಳ್ಳಿ (21) ಮೃತರು ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ವರ್ಷದಿಂದ ಅಡುಗೆ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಅವರು ಮೂಲತಃ, ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮಹಳ್ಳಿ ತಾಲೂಕಿನ ರಾಮನಗರದವರು ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಸೊರಬ ಠಾಣೆ ಪೊಲೀಸರು ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News