ಸಮ್ಮಿಶ್ರ ಸರಕಾರ ಉಳಿಯುತ್ತದೆ: ಪರಿಷತ್ ಸದಸ್ಯ ಶರವಣ

Update: 2019-07-15 14:47 GMT

ಬೆಂಗಳೂರು, ಜು.15: ಬಿಜೆಪಿ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ನಿರಂತರವಾದ ಪ್ರಯತ್ನ ನಡೆಯುತ್ತಿದೆ. ಆದರೆ, ಅವರ ಯತ್ನಗಳೆಲ್ಲವೂ ವಿಫಲವಾಗಲಿದ್ದು, ಸರಕಾರ ಉಳಿಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಶರವಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ದೇವನಹಳ್ಳಿ ಬಳಿಯ ರೆಸಾರ್ಟ್ ಬಳಿ ಮಾತನಾಡಿದ ಅವರು, ರಾಜೀನಾಮೆ ನೀಡಿದ ಶಾಸಕರ ಹಿಂದೆ ಬಿಜೆಪಿ ನಾಯಕರ ಕೈವಾಡವಿದ್ದು, ಅವರೇ ಸರಕಾರವನ್ನು ಬೀಳಿಸಲು ಮುಂದಾಗಿದ್ದಾರೆ. ಮೂರು ಬಾರಿ ಪ್ರಯತ್ನ ಮಾಡಿ ವಿಫಲವಾಗಿದ್ದು, ಈ ಬಾರಿಯೂ ಅವರ ಯತ್ನ ಕೈಕೊಡುವುದಿಲ್ಲ ಎಂದು ತಿಳಿಸಿದರು.

ಅತೃಪ್ತ ಶಾಸಕರು ಎಲ್ಲರೂ ವಾಪಸ್ಸು ಬರುವ ವಿಶ್ವಾಸವಿದೆ. ಆದರೆ, ಈ ಬಗ್ಗೆ ಈಗಲೇ ಏನೂ ಮಾತನಾಡುವುದಿಲ್ಲ ಎಂದು ಅತೃಪ್ತ ಶಾಸಕರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಹೇಳಿ ಹೊರಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News