ಮಾಜಿ ಪ್ರಧಾನಿಯನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ

Update: 2019-07-15 16:43 GMT

ಬೆಂಗಳೂರು, ಜು.15: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆ ಕಲಾಪ ಆರಂಭಕ್ಕೂ ಮೊದಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ.

ಮೈತ್ರಿ ಸರಕಾರದ ವಿರುದ್ಧ ಅಸಮಾಧಾನಗೊಂಡು ಶಾಸಕರು ರಾಜೀನಾಮೆ ನೀಡಿದ ಬಳಿಕ ಸರಕಾರ ಬಹುಮತ ಕಳೆದುಕೊಂಡಿದ್ದು, ಸರಕಾರದ ಉಳಿವಿನ ಪ್ರಶ್ನೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಯೊಂದಿಗೆ ನಡೆಸಿರುವ ಚರ್ಚೆ ಬಹಳ ಮಹತ್ವ ಪಡೆದುಕೊಂಡಿದೆ. ಒಂದು ಗಂಟೆಗೂ ಅಧಿಕ ಸಮಯ ಚರ್ಚೆ ನಡೆಸಿದ್ದು, ರವಿವಾರ ನಡೆದ ಬೆಳವಣಿಗೆಗಳ ಕುರಿತು ಸುದೀರ್ಘವಾದ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.

ರವಿವಾರ ಸಾಯಂಕಾಲ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರುಗಳು ಅತೃಪ್ತ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದರೆ, ಪ್ರಯತ್ನ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರಕಾರ ಉಳಿಸಿಕೊಳ್ಳಲು ಬೇಕಿರುವ ತಂತ್ರಗಳ ಕುರಿತು ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News