ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾರಾಯಣಗೌಡರ ಅಣಕು ಶವಯಾತ್ರೆ

Update: 2019-07-15 16:51 GMT

ಕೆ.ಆರ್.ಪೇಟೆ, ಜು.15: ರಾಜೀನಾಮೆ ನೀಡಿರುವ ಶಾಸಕ ನಾರಾಯಣಗೌಡರ ವಿರುದ್ಧ ತಾಲೂಕು ಜೆಡಿಎಸ್ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ನಾರಾಯಣಗೌಡರ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.

ಸ್ಪೀಕರ್ ಅವರು ನಾರಾಯಣಗೌಡರ ರಾಜೀನಾಮೆ ಅಂಗೀಕರಿಸದೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಅವರು ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ, ಜಿಪಂ ಸದಸ್ಯರಾದ ಎಚ್.ಟಿ.ಮಂಜು, ಬಿ.ಎಲ್.ದೇವರಾಜು, ಎಪಿಎಂಸಿ ಅಧ್ಯಕ್ಷ ನಾಗರಾಜೇಗೌಡ, ಬಸ್ ಕೃಷ್ಣೇಗೌಡ, ಎಂ.ಪಿ.ಲೋಕೇಶ್, ಅಂಬಿಗರಹಳ್ಳಿ ಶಿವರಾಮು, ಪುರಸಭೆಯ ಸದಸ್ಯ ಸಂತೋಷ್ ಕುಮಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News