ಸಚಿವ ರೇವಣ್ಣ ವರ್ತನೆಗೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

Update: 2019-07-15 17:36 GMT

ಬಂಟ್ವಾಳ, ಜು. 15: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರವಿವಾರ ಆಗಮಿಸಿದ ಸಚಿವ ಎಚ್.ಡಿ.ರೇವಣ್ಣ ಅವರು, ವರದಿಗೆಂದು ತೆರಳಿದ್ದ  ಪತ್ರಕರ್ತರೊಂದಿಗೆ ವರ್ತಿಸಿದ ರೀತಿಯನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸುತ್ತದೆ.

ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಬೇಕು, ಸಚಿವರು ಪತ್ರಿಕಾ ಸಮುದಾಯದ ಕ್ಷಮೆ ಯಾಚಿಸಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಲು ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News