ಮಹಿಳೆಯ ಬ್ಯಾಂಕ್ ಖಾತೆಯಿಂದ 30 ಸಾವಿರ ರೂ. ಲಪಟಾಯಿಸಿದ ವಂಚಕರು: ದೂರು ದಾಖಲು
Update: 2019-07-16 12:11 GMT
ಶಿವಮೊಗ್ಗ, ಜು.16: ಆನ್ಲೈನ್ ವಂಚಕರ ತಂಡವು ಮಹಿಳೆಯೋರ್ವರ ಬ್ಯಾಂಕ್ ಖಾತೆಯಿಂದ 30 ಸಾವಿರ ರೂ. ಡ್ರಾ ಮಾಡಿಕೊಂಡು ವಂಚಿಸಿರುವ ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿನೋಬನಗರ ಬಡಾವಣೆಯ ಗೀತಾ ಎಸ್ ವಂಚನೆಗೊಳಗಾದ ಮಹಿಳೆ ಎಂದು ಗುರುತಿಸಲಾಗಿದೆ. ಕರೂರು ವೈಶ್ಯ ಬ್ಯಾಂಕ್ನಲ್ಲಿ ಇವರ ಖಾತೆಯಿದೆ. ಇವರ ಮೊಬೈಲ್ಗೆ 30 ಸಾವಿರ ರೂ. ಡ್ರಾ ಮಾಡಿಕೊಂಡಿರುವ ಮೆಸೇಜ್ ಬಂದಿದೆ.
ಬ್ಯಾಂಕ್ಗೆ ತೆರಳಿ ಪರಿಶೀಲಿಸಿದಾಗ ಯಾರೋ ವಂಚಕರು ಎಟಿಎಂ ಮೂಲಕ ಇವರ ಖಾತೆಯಿಂದ ಹಣ ಡ್ರಾ ಮಾಡಿಕೊಂಡಿದ್ದು ಗೊತ್ತಾಗಿದೆ. ಈ ಸಂಬಂಧ ಅವರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.