ಗಾಂಜಾ ಸೇವನೆ: ಇಬ್ಬರು ವಶಕ್ಕೆ

Update: 2019-07-16 17:18 GMT

ಉಡುಪಿ, ಜು.16: ಉದ್ಯಾವರ ಬಲಾಯಿಪಾದೆಯ ಬಳಿ ಜು.15ರಂದು ಮಧ್ಯಾಹ್ನ 3ಗಂಟೆ ಸುಮಾರಿಗೆ ಗಾಂಜಾ ಸೇವನೆ ಮಾಡುತ್ತಿದ್ದ ಶಿರ್ವ ಸುನ್ನಿ ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಶೋಯಿಬ್(20) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಮಣ್ಣಪಳ್ಳದ ಬಳಿ ಜು.14ರಂದು ಸಂಜೆ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪ್ರೀತಮ್ ಕೆ.(22) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News