ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2019-07-16 17:19 GMT

ಮಂಗಳೂರು, ಜು.16: ನಗರದ ಪದವಿನಂಗಡಿ ಪಚ್ಚನಾಡಿಯ ವ್ಯಕ್ತಿಯೋರ್ವರು ಸೋಮವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಚ್ಚನಾಡಿ ನಿವಾಸಿ ಶಂಕರ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಶಂಕರ್ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಕೆಲಸಕ್ಕೆ ಹೋಗಿದ್ದು, ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದ ಸಂದರ್ಭದಲ್ಲಿ ಗಂಡ ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಪತ್ನಿ ತನ್ನ ಪುತ್ರಿಯನ್ನು ಸಮೀಪದಲ್ಲಿಯೇ ಇರುವ ತಾಯಿ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News