ನೇರಳಕಟ್ಟೆ: ಲಾರಿ - ಆಂಬುಲೆನ್ಸ್ ನಡುವೆ ಅಪಘಾತ; ಮಹಿಳೆ ಮೃತ್ಯು

Update: 2019-07-16 18:12 GMT

ಬಂಟ್ವಾಳ : ಟಿಪ್ಪರ್ ಲಾರಿ ಹಾಗೂ ಆಂಬುಲೆನ್ಸ್ ನಡುವೆ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ನೇರಳಕಟ್ಟೆ ಎಂಬಲ್ಲಿ ಇದೀಗ ನಡೆದಿದೆ.

ಆಂಬುಲೆನ್ಸ್ ನಲ್ಲಿದ್ದವರು ಇಡ್ಕಿಡು ಗ್ರಾಮದ ಸೂರ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ರೋಗಿಯೊಬ್ಬರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆ ಯಿಂದ ಮಂಗಳೂರಿಗೆ ತರುತ್ತಿದ್ದ ವೇಳೆ ಪುತ್ತೂರಿನಿಂದ ಹೋಗುತ್ತಿದ್ದ ಲಾರಿಯು ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅಪಘಾತ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News