ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು

Update: 2019-07-16 18:15 GMT

ಮಂಡ್ಯ, ಜು.16: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್.ಪೇಟೆ ತಾಲೂಕು ಟಿ.ಬಿ.ಮಂಚನಹಳ್ಳಿ ಕಾಲುವೆ ಬಳಿ ಮಂಗಳವಾರ ನಡೆದಿದೆ.

ಅಂಚೆ ಮುದ್ದನಹಳ್ಳಿ ಗ್ರಾಮದ ದರ್ಶನ್(35) ಸಾವನ್ನಪ್ಪಿದ ವ್ಯಕ್ತಿ. ಇವರು, ಶೀಳನೆರೆಯ ನಾಡಕಚೇರಿಯ ನೆಮ್ಮದಿ ಕೇಂದ್ರಕ್ಕೆ ಹೋಗಿ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನೆ ನಡೆದು ಸುಮಾರು ಎರಡು ಗಂಟೆ ಕಳೆದರೂ ಸ್ಥಳಕ್ಕೆ ಬಾರದ ಸೆಸ್ಕ್ ಅಧಿಕಾರಿಗಳ ವಿರುದ್ಧ ಮೃತರ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News