ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದ ಶಾಸಕ ನಾಗೇಂದ್ರ: ಕಾರಣವೇನು ಗೊತ್ತೇ ?

Update: 2019-07-17 12:54 GMT

ಬೆಂಗಳೂರು, ಜು.17: ಅನಾರೋಗ್ಯದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಮಂಡಿಸಲಿರುವ ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಆಗಮಿಸಲು ಸಾಧ್ಯವಿಲ್ಲವೆಂದು ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ತಿಳಿಸಿದ್ದಾರೆ.

ಎದೆನೋವಿನಿಂದ ಬಳಲುತ್ತಿರುವ ಶಾಸಕ ನಾಗೇಂದ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಹಾಜರಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ಶುಕ್ರವಾರ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಿರುವುದರಿಂದ ಗುರುವಾರ(ಇಂದು) ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಗೆ ಬರಲು ಸಾಧ್ಯವಿಲ್ಲ. ಈ ಬಗ್ಗೆ ಸಹಕರಿಸಬೇಕು ಎಂದು ಅವರು ಹಿರಿಯ ಮುಖಂಡರಿಗೆ ಶಾಸಕ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News