ಕಮಲ ಪಾಳಯದಲ್ಲಿ ಭಿನ್ನಮತ ಸ್ಫೋಟ: ಸರಕಾರ ರಚನೆಗೆ ಮೊದಲೇ ಡಿಸಿಎಂ ಸ್ಥಾನಕ್ಕೆ ಕಿತ್ತಾಟ

Update: 2019-07-17 13:21 GMT

ಬೆಂಗಳೂರು, ಜು. 16: 'ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದರು’ ಎಂಬ ಮಾತಿನಂತೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚನೆಗೆ ಮೊದಲೇ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದ ಹಿರಿಯ ಮುಖಂಡರ ಮಧ್ಯೆ ಕಿತ್ತಾಟ ನಡೆದಿದ್ದು, ಭಿನ್ನಮತ ಸ್ಫೋಟಗೊಂಡಿದೆ.

ಬಿಜೆಪಿ ಹಿರಿಯ ಮುಖಂಡರಾದ ಅರವಿಂದ ಲಿಂಬಾವಳಿ, ಶ್ರೀರಾಮುಲು, ಕೆ.ಎಸ್.ಈಶ್ವರಪ್ಪ ಮಧ್ಯೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ರೆಸಾರ್ಟ್‌ನಲ್ಲಿ ಮಾತಿನ ಚಕಮಕಿ ನಡೆದಿದ್ದು, ಮುಖಂಡರ ಬೆಂಬಲಿಗರು ತಮ್ಮವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆಂದು ಗೊತ್ತಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಅರವಿಂದ ಲಿಂಬಾವಳಿ ಅವರನ್ನು ಡಿಸಿಎಂ ಮಾಡುವ ಭರವಸೆ ನೀಡಿದ್ದು, ಶ್ರೀರಾಮುಲು ಸೇರಿದಂತೆ ಅವರ ಬೆಂಬಲಿಗರನ್ನು ಕೆರಳಿಸಿದೆ. ಯಾವುದೇ ಕಾರಣಕ್ಕೂ ಲಿಂಬಾವಳಿ ಅವರಿಗೆ ಡಿಸಿಎಂ ಸ್ಥಾನ ನೀಡದೆ, ತಮಗೆ ನೀಡಬೇಕು ಎಂದು ಶ್ರೀರಾಮುಲು ಆಗ್ರಹಿಸಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News