ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ರೋಷನ್‌ ಬೇಗ್

Update: 2019-07-17 13:50 GMT

ಬೆಂಗಳೂರು, ಜು. 16: ‘ವಿಚಾರಣೆಗೆ ಹಾಜರಾಗಲು ತನಗೆ ಕಾಲಾವಕಾಶ ಕಲ್ಪಿಸಬೇಕು’ ಎಂದು ಕೋರಿ ಮಾಜಿ ಸಚಿವ ಆರ್.ರೋಷನ್‌ಬೇಗ್, ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ

ರೋಷನ್ ಬೇಗ್ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಬುಧವಾರ (ಜು.16) ಸಂಜೆ 4:30ಕ್ಕೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಮೂರು ದಿನ ಬಿಟ್ಟು ವಿಚಾರಣೆಗೆ ದಿನಾಂಕ ನಿಗದಿ ಮಾಡಿ ಎಂದು ಸ್ಪೀಕರ್ ರಮೇಶ್‌ಕುಮಾರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿರುವ ರೋಷನ್‌ಬೇಗ್, ಆ ಪತ್ರವನ್ನು ತಮ್ಮ ಆಪ್ತರ ಬಳಿ ಕೊಟ್ಟು ಸ್ಪೀಕರ್ ಕಚೇರಿಗೆ ತಲುಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶಾಸಕರ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಲಾಗಿತ್ತು. ಅದರ ಬೆನ್ನಲ್ಲೇ ರೋಷನ್ ಬೇಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News