ನಿರಂತರ ಪರಿಶ್ರಮದಿಂದ ಸಾಧನೆ: ಡಾ.ಆನಂದ ಉಪಾಧ್ಯಾಯ

Update: 2019-07-17 16:07 GMT

 ಉಡುಪಿ, ಜು.17: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ನಿರಂತರ ಪರಿಶ್ರಮದಿಂದ ಯಶಸ್ಸು ಪಡೆಯಬಹುದು. ಆದುದರಿಂದ ವಿದ್ಯಾರ್ಥಿಗಳು ಜ್ಞಾನ ಸಂಪಾದನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಮಸ್ಕತ್‌ನ ಎಂಬಿಎ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಡಾ.ಆನಂದ ಎಸ್.ಉಪಾಧ್ಯಾಯ ಹೇಳಿದ್ದಾರೆ.

ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಇಂದು ಆಯೋಜಿಸಲಾದ ಅಭಿವಿನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ಎಸ್. ವಹಿಸಿ ದ್ದರು. ಎಂ.ಕಾಂ ವಿಭಾಗದ ಸಂಚಾಲಕ ಡಾ.ಉಮೇಶ ಮಯ್ಯ ಕಾರ್ಯ ಕ್ರಮವನ್ನು ಸಂಯೋಜಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿತ್ಯಾ ನಂದ ಎನ್., ಇತರೆ ಸ್ನಾತಕೋತ್ತರ ವಿಭಾಗ ಸಂಚಾಲಕ ಡಾ.ಶ್ರೀಧರ ಪ್ರಸಾದ, ಅಶೋಕ ಭಂಡಾರಿ, ಡಾ.ರಾಮದಾಸ ಪ್ರಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News