ಅಧಿಕಾರಿಗೆ ಹಲ್ಲೆ: ಆರೋಪಿಗಾಗಿ ಮುಂದುವರೆದ ಶೋಧ
Update: 2019-07-17 16:09 GMT
ಉಡುಪಿ, ಜು.17: ಉಡುಪಿ ನಗರಸಭೆ ಕಿರಿಯ ಆರೋಗ್ಯ ನಿರೀಕ್ಷಕ ಎ.ಜೆ. ಪ್ರಸನ್ನ ಕುಮಾರ್(30) ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿ ಕೊಂಡಿರುವ ಆರೋಪಿ ವಡಭಾಂಡೇಶ್ವರ ವಾರ್ಡ್ ನಗರಸಭಾ ಬಿಜೆಪಿ ಸದಸ್ಯ ಯೋಗೀಶ್ ಸಾಲ್ಯಾನ್ ಎಂಬಾತನ ಶೋಧ ಕಾರ್ಯವನ್ನು ಪೊಲೀಸರು ಮುಂದುವರೆಸಿದ್ದಾರೆ.
ಈ ಸಂಬಂಧ ತಂಡ ರಚಿಸಿ ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಈವರೆಗೆ ಬಂಧನ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆ ಸಂಬಂಧ ನಗರಸಭೆ ಕಚೇರಿಯಲ್ಲಿ ಆಳವಡಿಸಲಾದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಯಿಂದ ಕಣ್ಣಿನ ಭಾಗಕ್ಕೆ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಪ್ರಸನ್ನ ಕುಮಾ್ ಅವರ ಚಿಕಿತ್ಸೆ ಮುಂದುವರೆದಿದೆ.