24 ಗಂಟೆಯೊಳಗೆ ಕೊಲೆ ಆರೋಪಿ ಬಂಧನ
Update: 2019-07-17 17:05 GMT
ಬೆಂಗಳೂರು, ಜು.17: ಕೊಲೆ ಪ್ರಕರಣದ ಆರೋಪಿ ಓರ್ವನನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಲಹಂಕ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ನಿವಾಸಿ ರಾಜು ಎಂಬಾತ ಆರೋಪಿ ಎಂದು ತಿಳಿದುಬಂದಿದೆ.
ಜು.15ರಂದು ಯಲಹಂಕದ ಕೋಗಿಲು ಕ್ರಾಸ್ ಲೇಔಟ್ನಲ್ಲಿ ಆರೋಪಿ ರಾಜು, ಹರೀಶ್ ಎಂಬಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಸ್ಥಳೀಯರ ಸಹಾಯದಿಂದ ಗಾಯಾಳು ಹರೀಶ್ನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ ಎನ್ನಲಾಗಿದೆ.
ಘಟನೆ ಸಂಬಂಧ ಮೃತ ಹರೀಶ್ ತಂದೆ ರಾಮಮೂರ್ತಿ ಎಂಬುವರು ಇಲ್ಲಿನ ಯಲಹಂಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರ ಅನ್ವಯ ಕಾರ್ಯಾಚರಣೆ ನಡೆಸಿದ ತನಿಖಾ ತಂಡ, ಆರೋಪಿ ರಾಜು ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.